ಸಾಲಭಾದೆಗೆ ಬೇಸತ್ತ ರೈತ ಸಾ*ವಿಗೆ ಶರಣು
ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ.
ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು. ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು ಆಗದೇ ಕಳೆ ಬೇಸತ್ತಿದ್ದರು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿರುವ ಹಳೆ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾರೆ ಕೂಡಲೇ ಅವರನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ್ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Tags:
ಆತ್ಮಹತ್ಯೆ ಸುದ್ದಿ