ಕುಡುಮಲ್ಲಿಗೆ ಸಮೀಪ ರಸ್ತೆ ಮಧ್ಯೆ ಪಲ್ಟಿಯಾದ ಭತ್ತದ ಕೊಯ್ಲು ಯಂತ್ರ
ತೀರ್ಥಹಳ್ಳಿ : ತಾಲೂಕಿನ ಕುಡುಮಲ್ಲಿಗೆ ಸಮೀಪ ಟ್ರಾಕ್ಟರ್ನಲ್ಲಿ ಸಾಗಿಸುತ್ತಿದ್ದ ಭತ್ತ ಕಟಾವು ಮಾಡುವ ಯಂತ್ರವೊಂದು ಆಕಸ್ಮಿಕವಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ರಸ್ತೆಯಲ್ಲಿ ಕೆಲಕಾಲ ವಾಹನಗಳ ಓಡಾಟಕ್ಕೆ ಅಡಚಣೆ ಉಂಟಾಯಿತು.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಈ ಭತ್ತದ ಮಿಷನ್ ಟ್ರಾಕ್ಟರ್ ಮೂಲಕ ಸಾಗಿಸಲಾಗುತ್ತಿತ್ತು. ಚಲಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಯಂತ್ರವು ರಸ್ತೆಯ ಮಧ್ಯಭಾಗದಲ್ಲೇ ಪಲ್ಟಿಯಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ವಾಹನ ಸವಾರರು ಜಮಾಯಿಸಿದ್ದು, ನಂತರ ಯಂತ್ರವನ್ನು ರಸ್ತೆಯಿಂದ ತೆರವುಗೊಳಿಸಲಾಯಿತು.
Tags:
ತೀರ್ಥಹಳ್ಳಿ ಸುದ್ದಿ